ಗೆಳೆಯನ ಭೇಟಿಗಾಗಿ ದುಬೈನಿಂದ ಬೆಂಗಳೂರಿಗೆ ಬಂದಿದ್ದ ಗಗನಸಖಿ ಸಾವು; ರಾತ್ರಿ ಇಬ್ಬರ ಮಧ್ಯೆ ನಡೆದಿದ್ದಾದ್ರೂ ಏನು?

Byವರದಿಗಾರ

Mar 12, 2023
ಬೆಂಗಳೂರು: ಶುಕ್ರವಾರ ಮಧ್ಯರಾತ್ರಿ ನಾಲ್ಕನೇ ಮಹಡಿಯಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೋರಮಂಗಲದ (Koramanagal, Bengaluru) ಎಂಟನೇ ಬ್ಲಾಕ್​ನಲ್ಲಿ ನಡೆದಿದೆ. ರೇಣುಕಾ ರೆಸಿಡೆನ್ಸಿಯ ನಾಲ್ಕನೇ ಮಹಡಿಯಿಂದ ಯುವತಿ (Young Girl) ಬಿದ್ದು ಸಾವನ್ನಪ್ಪಿರೋದು, ಇದು ಆತ್ಮಹತ್ಯೆಯೋ?
ಕೊಲೆಯೋ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 28 ವರ್ಷದ ಅರ್ಚನಾ ಧೀಮನ್ ಸಾವನ್ನಪ್ಪಿದ ಯುವತಿ. ದುಬೈನ (Dubai) ಖಾಸಗಿ ಏರ್​​ಲೈನ್ಸ್​​ನಲ್ಲಿ (Airlines) ಕೆಲಸ ಮಾಡಿಕೊಂಡಿದ್ದ ಅರ್ಚನಾ, ಕೋರಮಂಗಲದಲ್ಲಿರುವ ಗೆಳೆಯನ ಭೇಟಿಗೆ ಬಂದಿದ್ದರು. ಅರ್ಚನಾ ಗೆಳೆಯ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ (Private Company) ಕೆಲಸ ಮಾಡಿಕೊಂಡಿದ್ದು, ಕೋರಮಂಗಲದ ರೇಣುಕಾ ರೆಸಿಡೆನ್ಸಿಯಲ್ಲಿ ವಾಸವಾಗಿದ್ದನು. ಮೃತ ಅರ್ಚನಾ ಧೀಮನ್ ಮೂಲತಃ ಹಿಮಾಚಲ ಪ್ರದೇಶದವರು (Himachal Pradesh) ಎಂದು ತಿಳಿದು ಬಂದಿದೆ.

ಮಧ್ಯರಾತ್ರಿ ಸುಮಾರು 12 ಗಂಟೆಗೆ ಅರ್ಚನಾ ಧೀಮನ್ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ. ಶವವನ್ನು ಸೇಂಟ್ ಜಾನ್ಸ್​ ಆಸ್ಪತ್ರೆಯಲ್ಲಿರಿಸಿ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ.

ಗೆಳೆಯನ ಸುತ್ತ ಅನುಮಾನದ ಹುತ್ತ

ಇನ್ನು ಅರ್ಚನಾ ಗೆಳೆಯ ಆದೀಶ್ ಸುತ್ತ ಅನುಮಾನ ಮೂಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತ ಅರ್ಚನಾ ಗೆಳೆಯ ಆದೀಶ್​ನನ್ನು ಭೇಟಿಯಾಗಲು ದುಬೈನಿಂದ ಬೆಂಗಳೂರಿಗೆ ಬಂದಿದ್ದರು. ಕಳೆದ ಕೆಲ ವರ್ಷಗಳಿಂದ ಅರ್ಚನಾ ಮತ್ತು ಆದೀಶ್ ಪ್ರೀತಿಸುತ್ತಿದ್ರು. ಇದೀಗ ಗೆಳೆಯನ ಭೇಟಿಗೆ ಬಂದ ಅರ್ಚನಾ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಆದೀಶ್ ಕೇರಳ ಮೂಲದವನು ಎಂದು ತಿಳಿದು ಬಂದಿದೆ.

ಶುಕ್ರವಾರ ರಾತ್ರಿ ಇಬ್ಬರ ಮಧ್ಯೆ ಏನಾಗಿದೆ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಇಬ್ಬರ ಮಧ್ಯೆ ಜಗಳ ನಡೆದು ಅರ್ಚನಾಳನ್ನು ನಾಲ್ಕನೇ ಮಹಡಿಯಿಂದ ತಳ್ಳಿ ಕೊಲೆ ಮಾಡಲಾಗಿದೆಯಾ ಎಂಬ ಆಯಾಮಾದಲ್ಲಿಯೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸಿಸಿಟಿವಿ ಕ್ಯಾಮೆರಾ ಪರಿಶೀಲನೆ

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೋರಮಂಗಲ ಪೊಲೀಸರು ಅಪಾರ್ಟ್​​​ಮೆಂಟ್​​ ನಲ್ಲಿರುವ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸುತ್ತಿದ್ದಾರೆ.